ರುದ್ರಪ್ರಯಾಗ ದೇವಾಲಯ, ಅಲಕನಂದಾ ಮತ್ತು ಮಂದಾಕಿನಿ ಎಂಬ ಎರಡು ನದಿಗಳ ಸಂಗಮದ ಸ್ಥಳದಲ್ಲಿರುವ ಪ್ರಮುಖ ಧಾರ್ಮಿಕ ಕೇಂದ್ರವಾಗಿದೆ. ವಿನಾಶ ನಾಶಕ ದೇವ ಶಿವನನ್ನು ಪೂಜಿಸಲಾಗುವ ಈ ದೇವಸ್ಥಾನಕ್ಕೆ ಅನೇಕ ಪ್ರವಾಸಿಗರು ಪ್ರತಿ ವರ್ಷ ಭೇಟಿ ನೀಡುತ್ತಾರೆ. ಪುರಾಣದ ಪ್ರಕಾರ, ಶಿವ 'ರುದ್ರ' ನ ಅವತಾರವನ್ನು ಹೊಂದಿ, ಸಂಗೀತದಲ್ಲಿ ಪರಿಣಿತಿಯನ್ನು ಪಡೆಯಬೇಕೆನ್ನುವ ಅಭಿಲಾಷೆಯಿಂದ ಇಲ್ಲಿ ತಪಸ್ಸು ಮಾಡಿದ್ದ ಹಾಗು ನಾರದ ಮುನಿಗೆ ಆಶೀರ್ವಾದ ಮಾಡಿದ್ದನು ಎಂದು ಹೇಳಲಾಗುತ್ತದೆ. ಈ ಸ್ಥಳದ ಹತ್ತಿರದಲ್ಲಿ ಜಗದಂಬಾ ದೇವಾಲಯವನ್ನೂ ಕಾಣಬಹುದು.