Search
  • Follow NativePlanet
Share
ಮುಖಪುಟ » ಸ್ಥಳಗಳು» ಮುತ್ತತ್ತಿ

ಮುತ್ತತ್ತಿ - ಕಾವೇರಿ ನದಿಯ ದಂಡೆಗಳ ಜೊತೆ ಜೊತೆ..

11

ಮಂಡ್ಯ ಜಿಲ್ಲೆಯ ಕಾವೇರಿ ದಡದಲ್ಲಿರುವ ಮುತ್ತತ್ತಿ ಗ್ರಾಮವು ಪೌರಾಣಿಕ ಹಿನ್ನೆಲೆಯನ್ನು ಹೊಂದಿದೆ. ಬೆಂಗಳೂರಿನಿಂದ ರಸ್ತೆ ಮೂಲಕ 90 ನಿಮಿಷಗಳಲ್ಲಿ ಮುತ್ತತ್ತಿಯನ್ನು ತಲುಪಬಹುದು. ಮುತ್ತತ್ತಿ ಪೌರಾಣಿಕ ಮಹಾಕಾವ್ಯವಾದ ರಾಮಾಯಣದಲ್ಲಿ ಬರುವ ಒಂದು ಪ್ರದೇಶವಾಗಿದೆ ಎಂಬ ಪ್ರತೀತಿ ಇದೆ.ಇಲ್ಲಿ ಪ್ರಸಿದ್ಧವಾದ ಹನುಮಾನ ಮಂದಿರವಿದೆ ಅದಕ್ಕೆ ಸ್ಥಳೀಯರು ಹನುಮಂತರಾಯ ದೇವಸ್ಥಾನವೆಂದು ಕರೆಯುತ್ತಾರೆ.

 

ಕಾವೇರಿ ನದಿಯ ಹರಿವಿನ ಸುಂದರ ಪ್ರಕೃತಿ ಸೌಂದರ್ಯದೊಂದಿಗೆ ಕಂಗೊಳಿಸುವ ಚಿಕ್ಕ ಗ್ರಾಮವೇ ಮುತ್ತತ್ತಿ. ಕಾವೇರಿ ನದಿ ನೀರಿನಲ್ಲಿ ಭಾರಿ ಜನಪ್ರಿಯ ಸಾಹಸಕ್ರೀಡೆ ಕೋರಲ್ ರೈಡ್ ನ್ನು ಇಲ್ಲಿ ಪ್ರವಾಸಿಗರು ಆನಂದಿಸಬಹುದು.  ಕಾವೇರಿ ವನ್ಯಜೀವಿ ಧಾಮ ಮತ್ತು ದಟ್ಟ ಅರಣ್ಯಗಳಿಂದ ಸುತ್ತುವರಿದಿರುವ ಮುತ್ತತ್ತಿ ಗ್ರಾಮದ ಪ್ರಕೃತಿ ಸೌಂದರ್ಯ ಮನ ಸೆಳೆಯುತ್ತದೆ. ರಮಣೀಯ ಕಣಿವೆ,  ರಭಸದಿಂದ ಹರಿಯುವ ನೀರಿನ ಸೆಳವುಳ್ಳ ಸಣ್ಣ ಹಳ್ಳಗಳು ಇಲ್ಲಿವೆ. ಹಲವಾರು ಬಗೆಯ ಪ್ರಾಣಿ ಪಕ್ಷಿಗಳು ಈ ಅರಣ್ಯದಲ್ಲಿ ನೆಲೆಸಿವೆ.

 

ಒಂದರ ಮೇಲೊಂದರಂತೆ ಆಯ್ಕೆಗಳು

ಹುಲಿ, ಚಿರತೆ, ಕರಡಿ, ಕಾಡೆಮ್ಮೆ, ಕಾಡುಕೋಣ, ಕಾಡುಹಂಡಿ, ವಿವಿಧ ತಳಿಯ ಅಳಿಲು, ಜಿಂಕೆ, ಸಾಂಬಾರ್ ಮುಂತಾದ ಪ್ರಾಣಿಗಳು ಈ ಕಾಡಿನಲ್ಲಿ ನೆಲೆಸಿವೆ.ಮತ್ತೊಂದು ಪ್ರವಾಸಿ ತಾಣವಾಗಿರುವ ಭೀಮೇಶ್ವರಿ ಬಳಿ ಇರುವ ಮುತ್ತತ್ತಿ ಸುಂದರ ಪ್ರಾಕೃತಿಕ ಸೌಂದರ್ಯದೊಂದಿಗೆ ಚಾರಣಪ್ರಿಯರಿಗೆ ಸಂತಸ ಮೂಡಿಸುತ್ತದೆ. ಅದಕ್ಕೆಂದೇ ಅತೀ ಹೆಚ್ಚಿನ ಪ್ರಮಾಣದ ಚಾರಣಪ್ರಿಯರು ಇಲ್ಲಿಗೆ ಬರುತ್ತಾರೆ.ಅರಣ್ಯ ಇಲಾಖೆಯ ಅನುಮತಿಯೊಂದಿಗೆ ಈ ಅರಣ್ಯದಲ್ಲಿ ಪ್ರವಾಸಿಗರು ಚಾರಣ ಕೈಗೊಳ್ಳಬಹುದು.

ಇಲ್ಲಿರುವ ಸೊಲಿಗೆರೆ ಬೆಟ್ಟ ಸಮುದ್ರ ಮಟ್ಟದಿಂದ 1125 ಮೀ. ನಷ್ಟು ಎತ್ತರದಲ್ಲಿರುವ ಸೊಲಿಗೆರೆ ಬೆಟ್ಟದಿಂದ ಸುತ್ತಲಿನ ಪ್ರಕೃತಿ ಸೌಂದರ್ಯವನ್ನು ಕಣ್ತುಂಬಿಕೊಳ್ಳಬಹುದು. ಇಲ್ಲಿಂದ ಚಾರಣ ಮಾಡುತ್ತ ನಿಸರ್ಗಧಾಮವನ್ನು ನೋಡುತ್ತ ಭೀಮೇಶ್ವರಿ ಮತ್ತು ಸಂಗಮ ತಲುಪಬಹುದು.

ಬೆಂಗಳೂರಿನ ಜನತೆಗೆ ಮುತ್ತತ್ತಿಯು ಅಚ್ಚುಮೆಚ್ಚಿನ ಪಿಕ್ ನಿಕ್ ತಾಣವಾಗಿದೆ. ಪ್ರವಾಸಿಗರು ಇಲ್ಲಿ ಪ್ರಕೃತಿ ಸೌಂದರ್ಯ, ಕಾವೇರಿ ನದಿ, ಅರಣ್ಯ ಹಾಗೂ ಚಾರಣದಂತಹ ಸಾಹಸಕ್ರೀಡೆಯನ್ನು ಆನಂದಿಸಬಹುದು.

ಮುತ್ತತ್ತಿ ಪ್ರಸಿದ್ಧವಾಗಿದೆ

ಮುತ್ತತ್ತಿ ಹವಾಮಾನ

ಉತ್ತಮ ಸಮಯ ಮುತ್ತತ್ತಿ

  • Jan
  • Feb
  • Mar
  • Apr
  • May
  • Jun
  • July
  • Aug
  • Sep
  • Oct
  • Nov
  • Dec

ತಲುಪುವ ಬಗೆ ಮುತ್ತತ್ತಿ

  • ರಸ್ತೆಯ ಮೂಲಕ
    ಸಾತನೂರು ವರೆಗೆ ಕೆ.ಎಸ.ಆರ.ಟಿ.ಸಿ ಹಾಗು ಇತರೆ ಖಾಸಗಿ ಬಸ್ಸುಗಳಿದ್ದು, ಅಲ್ಲಿಂದ ಬೇರೆ ಬಸ್ಸುಗಳ ಮೂಲಕ ಮುತ್ತತ್ತಿಗೆ ಹೋಗಬಹುದಾಗಿದೆ.
    ಮಾರ್ಗಗಳ ಹುಡುಕಾಟ
  • ರೈಲಿನ ಮೂಲಕ
    ಮುತ್ತತ್ತಿಯಿಂದ ಬೆಂಗಳೂರು ರೈಲು ನಿಲ್ದಾಣವು 96 ಕಿ.ಮೀ. ದೂರದಲ್ಲಿದೆ. ಮುತ್ತತ್ತಿಯಲ್ಲಿ ರೈಲು ನಿಲ್ದಾಣವಿಲ್ಲ. ರೈಲಿನಲ್ಲಿ ಬರುವ ಪ್ರವಾಸಿಗರು ಬೆಂಗಳೂರು ರೈಲು ನಿಲ್ದಾಣದಲ್ಲಿ ಇಳಿದುಕೊಳ್ಳಬೇಕು. ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿರುವ ರೈಲು ನಿಲ್ದಾಣ ದೇಶದ ವಿವಿಧೆಡೆಯಿಂದ ಬರುವ ಪ್ರವಾಸಿಗರಿಗೆ ಅನುಕೂಲಕರವಾಗಿದೆ. ಮುಂಬಯಿ, ಚೆನ್ನೈ, ಕೋಲ್ಕತ್ತಾ, ದೆಹಲಿಯಿಂದ ಬರುವ ಪ್ರವಾಸಿಗರಿಗೆ ಈ ರೈಲು ನಿಲ್ದಾಣವು ಅನುಕೂಲಕರವಾಗಿದೆ. ಇಲ್ಲಿಂದ ಪ್ರವಾಸಿಗರು ನೇರವಾಗಿ ಟ್ಯಾಕ್ಸಿ ಅಥವಾ ಕರ್ನಾಟಕ ರಾಜ್ಯ ರಸ್ತ ಸಾರಿಗೆ ಸಂಸ್ಥೆಯ ಬಸ್ ಗಳಿಂದ ಸಾತನೂರು ವರೆಗೂ ಬಂದು ಅಲ್ಲಿಂದ ಮುತ್ತತ್ತಿ ಗ್ರಾಮಕ್ಕೆ ಬರಬಹುದಾಗಿದೆ.
    ಮಾರ್ಗಗಳ ಹುಡುಕಾಟ
  • ಆಕಾಶದ ಮೂಲಕ
    ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಮುತ್ತತ್ತಿಯಿಂದ 114 ಕಿ.ಮೀ. ಅಂತರದಲ್ಲಿದೆ. ಈ ವಿಮಾನ ನಿಲ್ದಾಣವು ದೇಶಿಯ ಮತ್ತು ವಿದೇಶಿ ಪ್ರವಾಸಿಗರಿಗೆ ಅನುಕೂಲಕರವಾಗಿದೆ.
    ಮಾರ್ಗಗಳ ಹುಡುಕಾಟ
One Way
Return
From (Departure City)
To (Destination City)
Depart On
24 Apr,Fri
Return On
25 Apr,Sat
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
24 Apr,Fri
Check Out
25 Apr,Sat
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
24 Apr,Fri
Return On
25 Apr,Sat

Near by City