ಮೈಸೂರು ಜಿಲ್ಲೆಯಲ್ಲಿ ಸಮುದ್ರ ಮಟ್ಟದಿಂದ 2155 ಅಡಿ ಎತ್ತರದಲ್ಲಿ ನೆಲೆಗೊಂಡಿರುವ ಪವಿತ್ರ ಕ್ಷೇತ್ರ ನಂಜನಗೂಡು. ತನ್ನ ಶ್ರೀಮಂತ ಪರಂಪರೆಯಿಂದಾಗಿ ಸಹಾ ಪ್ರವಾಸಿಗರ ಆಕರ್ಷಣೀಯ ತಾಣವಾಗಿದೆ. ಈ ಪಟ್ಟಣ ಮೊದಲಿಗೆ ಗಂಗರ ಆಳ್ವಿಕೆಗೆ ಒಳಪಟ್ಟಿತ್ತು, ನಂತರ ಹೊಯ್ಸಳರು ಇದನ್ನು ಆಳಿದರು , ಆನಂತರ ಮೈಸೂರು ಒಡೆಯರು ಇದನ್ನು ಆಳಿದರು. ಇತಿಹಾಸದಲ್ಲಿ ದಾಖಲಾದಂತೆ ಶ್ರೀರಂಗಪಟ್ಟಣವನ್ನು ಆಳಿದ ಹೈದರಾಲಿ ಮತ್ತು ಆತನ ಮಗ ಟಿಪ್ಪುಸುಲ್ತಾನ್ ನಂಜನಗೂಡಿನೊಂದಿಗೆ ತುಂಬಾ ಹತ್ತಿರದ ಬಾಂಧವ್ಯವನ್ನು ಹೊಂದಿದ್ದರು.
ನಂಜನಗೂಡಿನ ಕುರಿತು ಕೆಲವು ಸಂಗತಿಗಳು
ಈ ಪಟ್ಟಣವು ಇಲ್ಲಿ ನೆಲೆಗೊಂಡಿರುವ ದೈವವಾದ ನಂಜುಂಡೇಶ್ವರನಿಂದ ನಂಜನಗೂಡು ಎಂದು ಹೆಸರು ಪಡೆಯಿತು. ಕ್ಷೀರಸಾಗರ ಮಂಥನ ಮಾಡಿದಾಗ ಹೊರಬಂದ ವಿಷದಿಂದ ಭೂಮಿಯ ಜೀವಸಂಕುಲವನ್ನು ರಕ್ಷಿಸಲು ಶಿವನು ಆ ವಿಷವನ್ನು ಕುಡಿದು ನಂಜುಂಡನಾಗಿ ಈ ಕ್ಷೇತ್ರದಲ್ಲಿ ನೆಲೆಸಿದನು ಎಂಬ ಪ್ರತೀತಿ ಇದೆ. ನಂಜನಗೂಡು ದಕ್ಷಿಣ ಕಾಶಿಯೆಂದು ಪ್ರಸಿದ್ಧಿ ಪಡೆದಿದ್ದು, ಇಲ್ಲಿ ಮಾಡುವ ತೀರ್ಥ ಸ್ನಾನ ಮತ್ತು ದೈವದ ದರ್ಶನ ಪಾಪ ವಿಮೋಚಕ ಗುಣವುಳ್ಳದೆಂದು ಹೇಳಲಾಗುತ್ತದೆ.
ನಂಜನಗೂಡಿಗೆ ಭೇಟಿ ಕೊಡುವವರು ಶ್ರೀ ರಾಘವೇಂದ್ರ ಸ್ವಾಮಿ ಮಠ ಮತ್ತು ಪರಶುರಾಮ ಕ್ಷೇತ್ರಗಳಿಗೆ ಭೇಟಿ ಕೊಡಬಹುದು. ಕೆಲವು ಅಪರೂಪದ ರಾಘವೇಂದ್ರ ಸ್ವಾಮಿಗಳ ಮೂರ್ತಿಗಳನ್ನು ನೀವು ನಂಜನಗೂಡಿನ ಮಠದಲ್ಲಿ ಕಾಣಬಹುದು.
ಬೆಂಗಳೂರಿನಿಂದ 163 ಕಿ.ಮೀ ಮತ್ತು ಮೈಸೂರಿನಿಂದ 30 ಕಿ.ಮೀ ದೂರದಲ್ಲಿ ಇರುವ ನಂಜನಗೂಡಿಗೆ ರಸ್ತೆ ಮತ್ತು ರೈಲಿನ ಮೂಲಕ ಸುಲಭವಾಗಿ ತಲುಪಬಹುದು. ಕೇವಲ ತೀರ್ಥಕ್ಷೇತ್ರವೆಂದಷ್ಟೆ ಅಲ್ಲದೆ, ಮಿತವ್ಯಯದಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ತಾಣವಾಗಿ ಸಹಾ ಇದನ್ನು ಸಂದರ್ಶಿಸಬಹುದು.