ರೇಷ್ಮೆ ನಗರ ರಾಮನಗರ ಬೆಂಗಳೂರಿನಿಂದ ಸುಮಾರು 50 ಕಿಲೋಮೀಟರು ದೂರದಲಿದ್ದು, ನೈರುತ್ಯ ದಿಕ್ಕಿನಲ್ಲಿದೆ ಹಾಗು ಇದು ರಾಮನಗರ ಜಿಲ್ಲೆಯ ಜಿಲ್ಲಾಕೇಂದ್ರ. ಕರ್ನಾಟಕ ರಾಜ್ಯದ ಇತರೆ ಭಾಗಗಳಂತೆ ಇದೂ ಕೂಡ ಗಂಗ, ಚೋಳ, ಹೊಯ್ಸಳ ಹಾಗು ಮೈಸೂರು ರಾಜರ ಆಳ್ವಿಕೆಗೆ ಒಳಪಟ್ಟಿತ್ತು ಆದರೆ ಈ ಪಟ್ಟಣ ಏಕಾಏಕಿ ಪ್ರಸಿದ್ದಿಗೆ ಬಂದದ್ದು ಸುಮಾರು 70ರ ದಶಕದಲ್ಲಿ ಇಲ್ಲಿ ನಡೆದ 'ಶೋಲೆ' ಚಲನ ಚಿತ್ರದ ಚಿತ್ರೀಕರಣದಿಂದ.
ರಾಮನಗರದ ಬೆಟ್ಟ ಪ್ರದೇಶ
ರಾಮನಗರವು, ಶಿವರಾಮಗಿರಿ, ಸೋಮಗಿರಿ, ಕೃಷ್ಣಗಿರಿ, ಯತಿರಾಜಗಿರಿ, ರೇವಣ ಸಿದ್ದೇಶ್ವರ, ಸಿಡಿಲಕಲ್ಲು ಹಾಗು ಜಲ ಸಿದ್ದೇಶ್ವರ ಎಂಬ 7 ಭವ್ಯ ಬೆಟ್ಟಗಳಿಂದ ಸುತ್ತುವರಿದಿದೆ. ಇಲ್ಲಿ ರೇಷ್ಮೆಯನ್ನು ಹೆಚ್ಚಾಗಿ ಬೆಳೆಯುವುದರಿಂದ ಈ ಊರು ರೇಷ್ಮೆ ನಗರವೆಂದೂ ಹೆಸರುವಾಸಿ. ವಿಶ್ವ ವಿಖ್ಯಾತ ಮೈಸೂರು ರೇಷ್ಮೆ ಸೀರೆಗಳನ್ನು ರಾಮನಗರದ ರೇಷ್ಮೆಯನ್ನು ಬಳಸಿಯೇ ನೇಯಲಾಗುತ್ತದೆ.
ಪ್ರಕೃತಿ ಪ್ರೇಮಿಗಳಿಗೆ ಖುಷಿ ಕೊಡುವ ವಿಚಾರವೆಂದರೆ ಇಲ್ಲಿರುವ ಬೆಟ್ಟಗಳು ಈಗ ಅಳಿವಿನಂಚಿನಲ್ಲಿರುವ ಹಳದಿ ಕುತ್ತಿಗೆಯ ಬುಲ್ ಬುಲ್ ಹಾಗು ಉದ್ದ ಕೊಕ್ಕಿನ ರಣಹದ್ದುಗಳಿಗೆ ಮನೆಯಾಗಿರುವುದು. ಇಲ್ಲೇ ಜಾನಪದ ಲೋಕವಿದ್ದು ಕರ್ನಾಟಕದ ಜಾನಪದ ಕಲೆ ಹಾಗು ಸಂಸೃತಿಗೆ ಸಂಬಂದ್ದಪಟ್ಟ ಸಣ್ಣ ವಸ್ತು ಸಂಗ್ರಹಾಲಯವನ್ನು ಇಲ್ಲಿ ನೋಡಬಹುದು. ಈ ಪ್ರದೇಶ ಬೆಟ್ಟಗಳಿಂದ ಸುತ್ತುವರಿದಿದ್ದು ಪರ್ವತಾರೋಹಣ ಪ್ರಿಯರಿಗೆ ಹೇಳಿ ಮಾಡಿಸಿದ ತಾಣವಾಗಿದೆ ಹಾಗು ಇದು ಈ ಪ್ರದೇಶದ ಪ್ರವಾಸೋದ್ಯಮಕ್ಕೂ ಆಸರೆಯಾಗಿದೆ. ರಾಮನಗರ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿರುವುದರಿಂದ ಇಲ್ಲಿಗೆ ಈ ಎರಡೂ ನಗರಗಳಿಂದ ರಸ್ತೆಯ ಮೂಲಕ ಸುಲಭವಾಗಿ ತಲುಪಬಹುದು.