ಲಕ್ಷ್ಮಣ ಝೂಲಾ 450 ಅಡಿ ಎತ್ತರದ ಸಸ್ಪೆನ್ಶನ್ ಸೇತುವೆಯಾಗಿದ್ದು ನದಿಗಳು, ದೇವಸ್ಥಾನಗಳು ಮತ್ತು ಆಶ್ರಮಗಳ ಮೋಹಕ ನೋಟ ಇಲ್ಲಿ ಸಿಗುತ್ತದೆ. ಮೂಲತಃ ಇದು ನಾರಿನ ಸೇತುವೆಯಾಗಿದ್ದು 1939 ರಲ್ಲಿ ಇದನ್ನು ತೂಗಾಡುವ ಕಬ್ಬಿಣದ ಸೇತುವೆಯಾಗಿ ಮಾರ್ಪಡಿಸಿ ಕಟ್ಟಲಾಗಿದೆ. ಶ್ರೀರಾಮನ ತಮ್ಮ ಲಕ್ಷ್ಮಣ ಒಮ್ಮೆ ಈ ಸೇತುವೆಯ ಮೂಲಕ ಗಂಗಾ ನದಿಯನ್ನು ದಾಟಿದನೆಂಬ ಕಥೆಯಿದೆ. ಹೀಗಾಗಿ ಈ ಸೇತುವೆಗೆ ಲಕ್ಷ್ಮಣ ಝೂಲಾ ಎನ್ನಲಾಗುತ್ತದೆ. ಪ್ರಸಿದ್ದ ಸ್ವರ್ಗ್ ಆಶ್ರಮ ಇಲ್ಲಿಂದ 2 ಕಿಲೋ ಮೀಟರ್ ಅಂತರದಲ್ಲಿದೆ. ಹತ್ತಿರದಲ್ಲಿರುವ ರಾಮ್ ಝೂಲಾ ಕೂಡ ಮತ್ತೊಂದು ಆಕರ್ಷಣೆ. ಲಕ್ಷ್ಮಣ ಝೂಲಾದ ಪ್ರತಿರೂಪದಂತಿರುವ ರಾಮ್ ಝೂಲಾವನ್ನು 1980 ರಲ್ಲಿ ಕಟ್ಟಲಾಗಿದೆ.