ಐತಿಹಾಸಿಕ ಸ್ಥಳಗಳಿಂದ ಕೂಡಿದ ಶ್ರೀರಂಗಪಟ್ಟಣಕ್ಕೆ ಭೇಟಿಕೊಡುವುದು ನಿಜಕ್ಕು ಒಂದು ಮೌಲ್ಯಯುತವಾದ ಪ್ರವಾಸವಾಗುತ್ತದೆ. ಶ್ರೀರಂಗಪಟ್ಟಣವು ಕಾವೇರಿ ನದಿಯ ಎರಡು ಕವಲುಗಳಿಂದ ನಿರ್ಮಾಣವಾದ ದ್ವೀಪದ ಊರಾಗಿದೆ. ಈ ದ್ವೀಪವು 13 ಚ.ಕಿ.ಮೀ ವಿಸ್ತೀರ್ಣವಿದ್ದು, ಮೈಸೂರಿಗೆ ತುಂಬ ಹತ್ತಿರದಲ್ಲಿದೆ.
ಈ ಪ್ರಾಂತ್ಯದ ಐತಿಹಾಸಿಕ ಪ್ರಾಮುಖ್ಯತೆ.
ಶ್ರೀರಂಗಪಟ್ಟಣವು ತನ್ನ ಐತಿಹಾಸಿಕ ಪ್ರಾಮುಖ್ಯತೆಯಿಂದಾಗಿ ಪ್ರಸಿದ್ಧ ಪ್ರವಾಸಿ ಸ್ಥಳವಾಗಿದೆ. ಈ ಊರು ಇಲ್ಲಿ 9ನೇ ಶತಮಾನದಲ್ಲಿ ನಿರ್ಮಾಣವಾದ ರಂಗನಾಥಸ್ವಾಮಿ ದೇವಾಲಯದಿಂದಾಗಿ ಶ್ರೀರಂಗಪಟ್ಟಣ ಎಂಬ ಹೆಸರು ಪಡೆದಿದೆ. ಈ ದೇವಾಲಯವು ಹಲವಾರು ವರ್ಷಗಳಿಂದ ವಿವಿಧ ಬಗೆಯ ಸಿಂಗಾರಗಳನ್ನು ಕಾಣುತ್ತಾ ಬೆಳೆದಿದೆ. ಅದರ ಫಲವಾಗಿ ಈಗ ಈ ದೇವಾಲಯವು ಹೊಯ್ಸಳ ಮತ್ತು ವಿಜಯನಗರ ಶೈಲಿಯ ಸಂಯುಕ್ತ ವಾಸ್ತುಶಿಲ್ಪಕ್ಕೆ ಉದಾಹರಣೆಯಾಗಿ ನಿಂತಿದೆ.
ಈ ಊರು ಟಿಪ್ಪು ಸುಲ್ತಾನನ ಕಾಲದಲ್ಲಿ ಮೈಸೂರಿನ ರಾಜಧಾನಿಯಾದಾಗ ತನ್ನ ಪ್ರಾಮುಖ್ಯತೆಯನ್ನು ಗಳಿಸಿತು. ಈ ಊರಿನ ವಾಸ್ತು ಶಿಲ್ಪವು ಇಂಡೋ –ಮುಸ್ಲಿಂ ಪರಂಪರೆಗೆ ಸೇರಿದೆ. ಇದರ ಪ್ರಭಾವವನ್ನು ಇಲ್ಲಿನ ಸ್ಮಾರಕಗಳಾದ ದರಿಯಾ ದೌಲತ್ ಬಾಗ್ ಮತ್ತು ಜಾಮ ಮಸೀದಿಗಳಲ್ಲಿ ಸ್ಪಷ್ಟವಾಗಿ ಕಾಣಬಹುದು.
ಶ್ರೀರಂಗಪಟ್ಟಣವು ಬೆರಗುಗೊಳಿಸುವ ಸುಂದರ ತಾಣಗಳನ್ನು ಹೊಂದಿದೆ. ಭಾರತದ ಎರಡನೆ ಅತಿದೊಡ್ಡ ಜಲಪಾತವೆಂದು ಪರಿಗಣಿಸಲ್ಪಟಿರುವ ಶಿವನಸಮುದ್ರ ಜಲಪಾತದಂತಹ ಪ್ರಸಿದ್ಧ ವಿಹಾರ ತಾಣಗಳು ಇಲ್ಲಿವೆ.
ಶ್ರೀರಂಗಪಟ್ಟಣದ ಸಂಗಮ - ಇಲ್ಲಿ ಕಾವೇರಿ, ಕಬಿನಿ ಮತ್ತು ಹೇಮಾವತಿ ನದಿಗಳು ಕೂಡುವ ಸಂಗಮವಿದ್ದು ನೋಡಲು ಯೋಗ್ಯವಾದ ಸ್ಥಳವಾಗಿದೆ.
ಶ್ರೀರಂಗಪಟ್ಟಣವು ಬೆಂಗಳೂರಿನಿಂದ 127 ಕಿ.ಮೀ ಮತ್ತು ಮೈಸೂರಿನಿಂದ 13 ಕಿ.ಮೀ ದೂರದಲ್ಲಿ ನೆಲೆಸಿದೆ. ಈ ಊರು ತನ್ನದೆ ಆದ ರೈಲುನಿಲ್ದಾಣವನ್ನುಹೊಂದಿದೆ. ಮೈಸೂರು ಇಲ್ಲಿಗೆ ಸಮೀಪದ ವಿಮಾನನಿಲ್ದಾಣವಾಗಿದೆ. ರಸ್ತೆಯಮೂಲಕವು ಶ್ರೀರಂಗಪಟ್ಟಣಕ್ಕೆ ಸುಲಭವಾಗಿ ತಲುಪಬಹುದು. ಈ ದ್ವೀಪವು ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ನೆಲೆಸಿದೆ.