ಅರುಣಾಚಲೇಶ್ವರ ದೇವಸ್ಥಾನ ಅಣ್ಣಾಮಲೈ ಬೆಟ್ಟದ ತಪ್ಪಲಿನಲ್ಲಿದೆ. ಹಿಂದೂ ಭಕ್ತಾಧಿಗಳಿಗೆ ಇದು ಪವಿತ್ರ ಕ್ಷೇತ್ರ. ಇಲ್ಲಿ ಶಿವಪೂಜೆ ಸಡೆಯುತ್ತಿದ್ದು ಶೈವರಿಗೆ ಹೆಚ್ಚಿನ ಮಹತ್ವವುಳ್ಳ ಕ್ಷೇತ್ರವಿದು.
ದೇವಸ್ಥಾನದಲ್ಲಿ ಶಿವನನ್ನು ಪ್ರತಿನಿಧಿಸುವ ಲಿಂಗವಿದೆ. ಲಿಂಗದ ಜೊತೆಗೆ ಪಾರ್ವತಿ ದೇವಿಯ ಪೂಜೆಯೂ ನಡೆಯುತ್ತದೆ. ಪಾರ್ವತಿ ದೇವಿಯನ್ನು ಇಲ್ಲಿ ಉನ್ನಮುಲ್ಯಮ್ಮ ಎಂದು ಪೂಜಿಸಲಾಗುತ್ತದೆ. ದೇವಸ್ಥಾನವನ್ನು ಅಗ್ನಿ ಪ್ರತಿಕವೆಂದು ಭಾವಿಸಲಾಗುತ್ತದೆ ಮತ್ತು ಶಿವನನ್ನು ಅಗ್ನಿ ಲಿಂಗವೆಂದು ಕರೆಯುತ್ತಾರೆ.ತಮಿಳು ಸಂತರು ನಾಯನ್ನರು ಬರೆದ ಶಾಸ್ತ್ರೋಕ್ತ ಪದ್ಯಗಳಲ್ಲಿ ದೇವಸ್ಥಾನದ ಉಲ್ಲೇಖವಿದೆ.
ದೇಶದಲ್ಲಿಯೇ ಅತ್ಯಂತ ದೊಡ್ಡ ದೇವಸ್ಥಾನ ಇದು. ಸುಮಾರು 10 ಹೆಕ್ಟೇರ್ ನಷ್ಟು ಸ್ಥಳದಲ್ಲಿ ದೇವಸ್ಥಾನವನ್ನು ನಿರ್ಮಿಸಲಾಗಿದೆ. ಅದ್ಭುತವಾದ ನಾಲ್ಕು ಗೋಪುರಗಳಿವೆ. ಪೂರ್ವದ ಗೋಪುರ 66 ಮೀಟರ್ ಎತ್ತರವಿದ್ದು ಭಾರತದ ಎತ್ತರದ ಗೋಪುರವೆಂಬ ಹೆಗ್ಗಳಿಕೆ ಪಡೆದುಕೊಂಡಿದೆ.


Click it and Unblock the Notifications