ನಮ್ಮ ದೇಶದಲ್ಲಿ ಸಾಕಷ್ಟು ಗಣೇಶನ ದೇವಾಲಯಗಳಿವೆ. ಆ ದೇವಾಲಯಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿರುವ ಗಣೇಶನ ದೇವಾಲಯವೂ ಒಂದು. ಇದು ಬಹಳ ಪ್ರಭಾವಶಾಲಿ ಹಾಗೂ ಮಹಿಮಾನ್ವಿತ ದೇವಾಲಯವಾಗಿದೆ. ಅದುವೇ ಸೌತಡ್ಕ ಮಹಾಗಣಪತಿ ದೇವಸ್ಥಾನ. ಇದೊಂದು ಪವಿತ್ರ ಧಾರ್ಮಿಕ ಸ್ಥಳದ ಜೊತೆಗೆ ಪ್ರವಾಸಿತಾಣವೂ ಆಗಿದೆ.
ಸೌತಡ್ಕ ಕ್ಷೇತ್ರ
PC: youtube
ಗೋಪಾಲಕರಿಗೆ ಕಾಡಿನಲ್ಲಿ ಒಂದು ಕಲ್ಲಿನ ಗಣಪತಿ ವಿಗ್ರಹ ಸಿಗುತ್ತದೆ. ಆ ಗಣಪತಿಯನ್ನು ಗೋಪಾಲಕರು ಒಂದು ಸ್ಥಳದಲ್ಲಿ ಕಟ್ಟೆಯ ಮೇಲೆ ಪ್ರತಿಷ್ಠಾಪಿಸುತ್ತಾರೆ. ಆ ಸ್ಥಳವೇ ಇಂದು ಸೌತಡ್ಕ ಕ್ಷೇತ್ರ ಎಂದೆನಿಸಿದೆ.
ಶೃಂಗೇರಿ ಶಾರದೆಯ ಸನ್ನಿಧಾನದಲ್ಲಿರುವ ಮೂಗುತ್ತಿ ಮೀನು ನೋಡಿದ್ರೆ ಅದೃಷ್ಟವಂತೆ
ಸೌತಡ್ಕ ಹೆಸರು ಬಂದಿದ್ದು ಹೇಗೆ?
PC: youtube
ಗೋಪಾಲಕರು ಸೌತೆಕಾಯಿಯನ್ನು ಸಮರ್ಪಿಸಿದ್ದರಿಂದ ಸೌತಡ್ಕ ಎನ್ನುವ ಹೆಸರು ಬಂದಿತು. ಇಂದಿಗೂ ಕೆಲವರು ಇಲ್ಲಿನ ಗಣೇಶನಿಗೆ ಸೌತೆಕಾಯಿಯನ್ನು ಅರ್ಪಿಸುವ ಆಚರಣೆಯನ್ನು ಕಾಣಬಹುದು.
ಗರ್ಭಗುಡಿ ಇಲ್ಲ
PC: youtube
ಈ ದೇವಸ್ಥಾನದ ವಿಶೇಷತೆ ಎಂದರೆ ಇತರ ದೇವಸ್ಥಾನಗಳಂತೆ ಈ ದೇವಸ್ಥಾನಕ್ಕೆ ಯಾವುದೇ ಕಟ್ಟಡವಿಲ್ಲ, ಗರ್ಭಗುಡಿಯಿಲ್ಲ, ಗೋಪುರವಿಲ್ಲ. ಬದಲಾಗಿ ಇದೊಂದು ಬಯಲು ಗಣಪತಿ. ತೆರೆದ ಸ್ಥಳದಲ್ಲಿರುವ ಗಣಪತಿ.
ಶಕುಂತಲಾ ಸ್ನಾನ ಮಾಡುತ್ತಿದ್ದ ಜಲಪಾತ ಇಲ್ಲಿದೆ ನೋಡಿ
ಗಂಟೆಯ ಹರಕೆ
PC: youtube
ಹರಕೆ ಹೊತ್ತು ಈ ಸ್ಥಳಕ್ಕೆ ಬಂದು ಗಣಪನಲ್ಲಿ ಪ್ರಾರ್ಥಿಸಿದರೆ ೨ ತಿಂಗಳೊಳಗಾಗಿ ಅವರ ಬೇಡಿಕೆ ಈಡೇರುತ್ತದಂತೆ. ಅದರ ಮರುದಿನವೇ ಈ ಕ್ಷೇತ್ರಕ್ಕೆ ಬಂದು ಗಂಟೆ ಕಟ್ಟುತ್ತಾರೆ. ಹಾಗಾಗಿ ಇಲ್ಲಿ ಸಾವಿರಾರು ಗಂಟೆಗಳನ್ನು ಕಾಣಬಹುದು.
ಹರಕೆ ಈಡೇರುತ್ತದೆ
PC: youtube
ವಿದ್ಯೆ ಕರುಣಿಸಿ ಹೋದವರಿಗೆ ವಿದ್ಯೆ ಪ್ರಾಪ್ತಿಯಾಗುತ್ತದೆ. ಹಣದ ಸಮಸ್ಯೆ ಇದ್ದರೆ ಅದೂ ದೂರವಾಗುತ್ತಂತೆ. ದಂಪತಿಗಳಿಗೆ ಸಂತಾನ ಭಾಗ್ಯ ದೊರೆಯುತ್ತದೆ ಎನ್ನಲಾಗುತ್ತದೆ. ಮಕ್ಕಳನ್ನು ಅನ್ನಪ್ರಾಶನಕ್ಕೂ ಇಲ್ಲಿಗೆ ಕರೆತರುತ್ತಾರೆ.
ಸನ್ನಿಧಾನಕ್ಕೆ ಬಂದವರನ್ನು ಎಂದೂ ಕೈಬಿಡೋದಿಲ್ಲವಂತೆ ಗುರು ರಾಯರು
ಪ್ರಮುಖ ಸೇವೆಗಳು
PC: youtube
ಅಪ್ಪ ಕಜ್ಜಾಯ, ಪಂಚಕಜ್ಜಾಯ, ರಂಗಪೂಜೆ, ಮೂಡಪ್ಪ ಸೇವೆ ಈ ಕ್ಷೇತ್ರದಲ್ಲಿ ನಡೆಯುವು ಸೇವೆಗಳಾಗಿವೆ. ಗೋ ಶಾಲೆಗಳೂ ಇವೆ. ೧೫೦ ರಿಂದ ೨೦೦ ಗೋವುಗಳೂ ಇಲ್ಲಿವೆ. ಯಾವುದೇ ಬೆಲ್ಲ ಅವಲಕ್ಕಿ ಇಲ್ಲಿನ ದೇವರಿಗೆ ನೈವೇದ್ಯ. ದಿನದ ೨೪ ಗಂಟೆಯೂ ತೆರೆದಿರುತ್ತದೆ ಈ ಕ್ಷೇತ್ರ.
ಚೌತಿ, ಸಂಕಷ್ಟಿ
PC: youtube
ಸಂಕಷ್ಟಿ ದಿನ ಹಾಗೂ ಚೌತಿ ಸಂದರ್ಭದಲ್ಲಿ ಸಾವಿರಾರು ಭಕ್ತರು ಇಲ್ಲಿಗೆ ಬರುತ್ತಾರೆ. ಇಲ್ಲಿಯ ಗಣೇಶನಿಗೆ ಬಹಳ ಕಾರಣಿಕವಿದ್ದು, ಭಕ್ತರಿಗೆಲ್ಲರಿಗೂ ಒಳ್ಳೆಯದ್ದೇ ಆಗಿದೆ ಎನ್ನುವುದು ಇಲ್ಲಿನ ಭಕ್ತರ ಅನಿಸಿಕೆ.
ಇಲ್ಲಿಗೆ ಹೋದ್ರೆನೇ ಗೊತ್ತಾಗೋದು ಇಲ್ಲಿನ ದಸರಾದ ವೈಭವ
ತಲುಪುವುದು ಹೇಗೆ?
PC: youtube
ಧರ್ಮಸ್ಥಳದಿಂದ ೧೬ ಕಿ.ಮೀ ದೂರದಲ್ಲಿದೆ ಸೌತಡ್ಕ. ಧರ್ಮಸ್ಥಳಕ್ಕೆ ಹೋಗೋ ಬಸ್ಗಳು ಸೌತಡ್ಕಕ್ಕೆ ಹೋಗುತ್ತದೆ. ಸುಬ್ರಹ್ಮಣ್ಯದಿಂದ 45 ಕಿ.ಮೀ, ಮಂಗಳೂರಿನಿಂದ 82 ಕಿ.ಮೀ ಮತ್ತು ಕೊಕ್ಕಡದಿಂದ 2 ಕಿ.ಮೀ ದೂರದಲ್ಲಿದೆ. ಬೆಂಗಳೂರಿನಿಂದ, ಸೌತಡ್ಕವನ್ನು ನೆಲ್ಯಾಡಿ ಮತ್ತು ಧರ್ಮಸ್ಥಳದ ನಡುವೆ ರಸ್ತೆಯ ಮೂಲಕ ಪ್ರವೇಶಿಸಬಹುದು.